1 ಕೋಟಿ ರೂಪಾಯಿಗಿಂತ ಹೆಚ್ಚಿನ ಆದಾಯ ಹೊಂದಿರುವ ದೇವಾಲಯಗಳ ಆದಾಯದ ಮೇಲೆ 10 ಪ್ರತಿಶತ ತೆರಿಗೆಯನ್ನು ಪ್ರಸ್ತಾಪಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದ ನಂತರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಲನ್ನು ಕಂಡ ಕರ್ನಾಟಕ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಭಾರೀ ಮುಖಭಂಗ ವಾಗಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ 1 ಕೋಟಿಗಿಂತ ಕಡಿಮೆ ಆದಾಯ ಹೊಂದಿರುವ ದೇವಾಲಯಗಳಿಗೆ 5% ತೆರಿಗೆ ಹಾಗೂ 1 ಕೋಟಿಗಿಂತ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳಿಗೆ 10% ತೆರಿಗೆ ವಿಧಿಸಿ ಮಸೂದೆಯನ್ನು ಪಾಸ್ ಮಾಡಿದ್ದರು. ಆದರೆ ಈ ಮಸೂದೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬೆಂಬಲ ಸೂಚಿಸದೆ ಈ ಮಸೂದೆಯನ್ನು ಸೋಲಿಸಿದ್ದಾವೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಆರ್ಥಿಕವಾಗಿ ದಿವಾಳಿಯಾಗಿದೆ. ಈ ನಿಟ್ಟಿನಲ್ಲಿ ಹಿಂದೂಗಳ ದೇವಸ್ಥಾನದ ಹುಂಡಿಗೆ ಕಣ್ಣು ಹಾಕುತ್ತಿದೆ. ದೇವಸ್ಥಾನದ ಹಣ ಹೊಡೆಯಲು ಮುಂದಾಗುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಾಗುವುದು, ಈ ಬಗ್ಗೆ ಜನಜಾಗೃತಿ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂಬುದನ್ನು ಹೆಜ್ಜೆ ಹೆಜ್ಜೆಗೆ ರುಜುವಾತು ಮಾಡುತ್ತಿದೆ. ತಮ್ಮ ವಿಫಲತೆಯನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ತೋರಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದರು.
ದೇವಸ್ಥಾನಕ್ಕೆ ಕನ್ನ ಹಾಕೋ ಬದ್ಲು ವಿಧಾನಸೌಧದ ಮುಂದೆ ಹುಂಡಿ ಇಟ್ಟುಬಿಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಲೇವಡಿ ಮಾಡಿದ್ದಾರೆ.