2021-22 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಮಕ್ಕಳಿಗೆ ಕೇಂದ್ರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜುಲೈ.15 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ವೆಬ್ಸೈಟ್ ಮೂಲಕ https://bit.ly/ksgeaprathibapuraskara2022 ಸಲ್ಲಿಸಬಹುದು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅರ್ಜಿಗಳನ್ನು ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರಲ್ಲವೆಂಬುದನ್ನು ಖಚಿತಪಡಿಸಿಕೊಳ್ಳುವುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ/ ಪೋಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು.
ಅರ್ಜಿದಾರರು ಸಲ್ಲಿಸುವ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಸೇವಾ ದೃಢೀಕರಣ ಪ್ರಮಾಣ ಪತ್ರದ ನಮೂನೆಯಲ್ಲಿ ದೃಢೀಕರಣ ನೀಡಬೇಕು. ಸೇವಾ ದೃಢೀಕರಣ ಪತ್ರಕ್ಕೆ ಶಾಖಾ ಸಂಘದ ಅಧ್ಯಕ್ಷರ ಸಹಿ ಮತ್ತು ಮೊಹರನ್ನು ಕಡ್ಡಾಯವಾಗಿ ಹಾಕುವುದು. ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆಯ ಅಧ್ಯಕ್ಷರ ದೃಢೀಕರಣ ಪತ್ರವಿಲ್ಲದೆ ಆನ್ಲೈನ್ ಮೂಲಕ ಸಲ್ಲಿಸಲ್ಪಡುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
i want to know the percentage limit for the cbse 10th students
ಶೇ. 90% ಕ್ಕಿಂತ ಹೆಚ್ಚಿನ ಅಂಕ