ಮಂಗಳವಾರದಂದು ನಗರದಲ್ಲಿ ಬಂದ್ಗೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಸೋಮವಾರ ತಿಳಿಸಿದ್ದು, ಈ ಬಗ್ಗೆ ಸಂಘಟಕರಿಗೆ ಈಗಾಗಲೇ ತಿಳಿಸಲಾಗಿದೆ ಎಂದಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಬೆಂಗಳೂರಿನಲ್ಲಿ ಸಿಆರ್ಪಿಸಿ ಸೆಕ್ಷನ್ 144 ಜಾರಿಯಲ್ಲಿರುವುದರಿಂದ ಐದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರುವಂತಿಲ್ಲ ಎಂದು ದಯಾನಂದ ಹೇಳಿದರು. “ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನ ವಿವಿಧ ತೀರ್ಪುಗಳ ಪ್ರಕಾರ, ಯಾವುದೇ ಬಂದ್ಗೆ ಅವಕಾಶವಿಲ್ಲ, ನಾವು ಎಲ್ಲಾ ಅಗತ್ಯ ಭದ್ರತೆಗಳನ್ನು ಮಾಡಿದ್ದೇವೆ ಎಂದರು.
ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದ್ದರೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಆಯುಕ್ತರು ತಿಳಿಸಿದ್ದಾರೆ.