ನಮ್ಮ ದಾವಣಗೆರೆ ಸೆ. 24: ನಗರದ ಪ್ರವಾಸಿ ಮಂದಿರದಲ್ಲಿ ರೈತ ಮುಖಂಡರು, ಜನ ಪ್ರತಿನಿಧಿಗಳು ಪೂರ್ವಭಾವಿ ಸಭೆ ನಡೆಸಿದ್ದು. ಭದ್ರಾ ನಾಳೆಯಿಂದ ನೀರು ನಿಲ್ಲಿಸಲಾಗಿದೆ. ಹೀಗಾಗಿ ಅಚ್ಚುಕಟ್ಟು ಪ್ರದೇಶದ ರೈತರ ಭತ್ತದ ಬೆಳೆ ಒಣಗುತ್ತಿವೆ. ನೀರು ಹರಿಸುವ ಕುರಿತಂತೆ ಇದುವರೆಗೆ ಸರ್ಕಾರದಿಂದ ಯಾವುದೇ ಲಿಖಿತ ಆದೇಶ ಬಂದಿಲ್ಲ, ಹಾಗಾಗಿ ಭದ್ರಾ ಡ್ಯಾಂನಿಂದ ನಾಲೆಗಳಿಗೆ ಆನ್-ಆಫ್ ವ್ಯವಸ್ಥೆ ಬದಲು ಈ ಹಿಂದೆ ನಿರ್ಧರಿಸಿದಂತೆ ನಿರಂತರ 100 ದಿನ ನೀರು ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ರೈತ ಒಕ್ಕೂಟ ನಾಳೆ ಸೆ. 25 ರಂದು ದಾವಣಗೆರೆ ಬಂದ್ ಗೆ ಕರೆಕೊಟ್ಟಿದ್ದು ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಬಂದ್ ನಡೆಸಲು ರೈತರು ನಿರ್ಧರಿಸಿದ್ದಾರೆ.
ಸೋಮವಾರ ಬೆಳಿಗ್ಗೆ 7.30ಕ್ಕೆ ಜಯದೇವ ವೃತ್ತದಲ್ಲಿ ಸಭೆ ಸೇರಿ ಸರ್ಕಾರದ ನಡೆಯನ್ನು ರೈತರು ಖಂಡಿಸಲಿದ್ದಾರೆ. ಬೆಗಳೂರು ಮಂಡ್ಯದಲ್ಲಿ ಕಾವೇರಿ ಹೋರಾಟ ಜೋರಾಗಿದ್ದರೆ, ದಾವಣಗೆರೆಯಲ್ಲಿ ಭದ್ರಾ ಹೋರಾಟ ದಿನದಿಂದ ದಿನಕ್ಕೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತ ಒಕ್ಕೂಟ ಕರೆ ನೀಡಿರುವ ದಾವಣಗೆರೆ ಬಂದ್ಗೆ ದಾವಣಗೆರೆ ಜಿಲ್ಲಾ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟಗಾರರ ಸಂಘ ಬೆಂಬಲ ಸೂಚಿಸಿದೆ.ಬಂದ್ ಗೆ ಜಿಲ್ಲಾ ಕಸಾಪ ನೈತಿಕ ಬೆಂಬಲ ಸೂಚಿಸಲಿದೆ ಎಂದು ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್, ರೈತ ಮುಖಂಡರಾದ ಬೆಳವನೂರು ಬಿ. ನಾಗೇಶ್ವರ ರಾವ್, ಎಚ್. ಆರ್. ಲಿಂಗರಾಜ್, ಬಿಜೆಪಿ ಮುಖಂಡರಾದ ಯಶವಂತ ರಾವ್ ಜಾಧವ್, ಎಲ್.ಎನ್. ಕಲ್ಲೇಶ್, ಅಜಯ್ ಕುಮಾರ್ ಬಿ. ಜೆ, ರಾಜನಹಳ್ಳಿ ಶಿವಕುಮಾರ್, ಕೊಳೇನಹಳ್ಳಿ ಸತೀಶ್, ಶಿವಪ್ರಕಾಶ್ ಆರ್, ಎಲ್, ಕಡ್ಲೆಬಾಳು ಧನಂಜಯ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.