ಪ್ರಜಾಪ್ರಭುತ್ವದ ಅಡಿಪಾಯ ಮತದಾನ, ಮೇ 7 ರಂದು ನಾವೆಲ್ಲರೂ ಮತದಾನ ಮಾಡೋಣ, ಪ್ರತಿಜ್ಞಾವಿಧಿ ಸ್ವೀಕಾರ.

ದಾವಣಗೆರೆ. ಮೇ. 03: ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದ್ದು, ನಾವೆಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಮೇಣದಬತ್ತಿ ಹಿಡಿದು ಮತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೇ.7 ರಂದು ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸುವುದಲ್ಲದೇ, ತಮ್ಮ ನೆರೆ ಹೊರೆಯವರಿಗೂ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು. ಈಗಾಗಲೇ ಮತದಾರರ ಜಾಗೃತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ.

ನಮ್ಮ ದಾವಣಗೆರೆ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ: 

ನಮ್ಮ ದಾವಣಗೆರೆ ವಾಟ್ಸಪ್ಪ್ ಗ್ರೂಪ್ 05

ಮತದಾರರು ಯಾವುದೇ ಅಮಿಷಗಳಿಗೆ ಬಲಿಯಾಗದೇ ಅರ್ಹರಿಗೆ ಮತದಾನ ಮಾಡಬೇಕೆಂದರು.
ಚುನಾವಣಾ ಆಯೋಗವು ಎಲ್ಲಾ ಜಿಲ್ಲೆಗಳಲ್ಲಿ ಮತದಾರರ ಜಾಗೃತಿಗೆ ನಡೆದ ಕಾರ್ಯಕ್ರಮಗಳ ಅಪ್‍ಲೋಡ್‍ಗಾಗಿ ವೆಬ್‍ಸೈಟ್ ಮಾಡಿದ್ದು ಅದರಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರೂ 600 ಕ್ಕೂ ಹೆಚ್ಚು ಸ್ವೀಪ್ ಕಾರ್ಯಕ್ರಮ ಮಾಡಿರುವ ದಾಖಲೆಗಳಿವೆ ಎಂದರು.

ನಗರದ ಖಾಸಗಿ ಬಸ್ ನಿಲ್ದಾಣದಿಂದ ಅರುಣ ಸರ್ಕಲ್‍ರವರೆಗೆ ಮೇಣದಬತ್ತಿ ಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳು, ಮಹಾನಗರಪಾಲಿಕೆ ಆರೋಗ್ಯ ನಿರೀಕ್ಷಕರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಯವರು ಸೇರಿದಂತೆ ಸಾರ್ವಜನಿಕರು ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ, ಸ್ವೀಪ್ ಸಮಿತಿಯ ರಾಯಾಭಾರಿ ಪೃಥ್ವಿ ಶಾಮನೂರು, ಜಿ.ಪಂ. ಯೋಜನಾಧಿಕಾರಿ ಮಲ್ಲನಾಯ್ಕ, ಲೀಡ್ ಬ್ಯಾಂಕ್ ಪ್ರಕಾಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!