ಜು. 15 ರಂದು ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಪ್ರಬಂಧದ ಮಾಧ್ಯಮ: ಕನ್ನಡ ಅಥವಾ ಆಂಗ್ಲ ಭಾಷೆ, ಯಾವುದಾದರೂ ಒಂದು ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು) ಪದವಿಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ
ಕೈಗಾರಿಕೆ-ಶೈಕ್ಷಣಿಕ ಒಗ್ಗೂಡಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು. ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಠಿಸುವ ಮಾರ್ಗಗಳು. ಕೌಶಲ್ಯ ಮತ್ತು ಸಾಮಥ್ರ್ಯಗಳ ಮೇಲೆ ಕೇಂದ್ರಿಕತವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ.
8 ರಿಂದ 12 ನೇ ತರಗತಿ/ಐಟಿಐ ವಿದ್ಯಾರ್ಥಿಗಳಿಗೆ ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ, ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ ವಿಷಯದ ಕುರಿತು ಪದ ಮಿತಿಯು 1000-1200 ಪದಗಳಿಗೆ ಮೀರದಂತೆ ಇರಬೇಕು. ವೆಬ್ಸೈಟ್: https/www.kaushalkar.com/app/skill-essay-competition ಲಿಂಕ್ ಮೂಲಕ ಕಳಿಸಬಹುದು.
ಜಿಲ್ಲಾ ಮಟ್ಟದ ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿಜೇತರಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗುವುದು. ಪ್ರಬಂಧ ಸಲ್ಲಿಕೆಗೆ ಜುಲೈ.10 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ-24, ದಾವಣಗೆರೆ ದೂರವಾಣಿ ಸಂಖ್ಯೆ:08192-259447/8971749636 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
good morning every one it is good things
About Prabanda