ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಅಲಿಯಾಸ್ ಸುಖಾ ದುನೆಕೆ ಹತ್ಯೆ ಮಾಡಿದ್ದು ನಾವೇ ಎಂದು ಜೈಲಿನಲ್ಲಿರುವ ಅತ್ಯಂತ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊಣೆಹೊತ್ತುಕೊಂಡಿದೆ.
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಕೆನಡಾದ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ನಡುವೆಯೇ ಈಗ ಕೆನಾಡದಲ್ಲಿ ಮತ್ತೊರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆಯಾಗಿದೆ. ಈ ಹತ್ಯೆ ಮಾಡಿದ್ದು ನಮ್ಮ ಗ್ಯಾಂಗ್ ಎಂದು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೊಣೆಹೊತ್ತುಕೊಂಡಿದ್ದಾನೆ.