15ನೇ ವಿಧಾನಸಭೆಯ ಕೊನೇಯ ಅಧಿವೇಶನ ಹಿನ್ನಲೆ ಇಂದು ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ ನಡೆಯಿತು. ಫೋಟೋಶೂಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಹಲವಾರು ಶಾಸಕರು ಭಾಗಿಯಾಗಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ಪ್ರಮುಖ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಫೋಟೋಶೂಟ್ಗೆ ಗೈರಾಗಿದ್ದರು.