ಮಹಾ ಶಿವರಾತ್ರಿಯಂದು ಸೋಮನಾಥ ದೇಗುಲಕ್ಕೆ ಮುಕೇಶ್ ಅಂಬಾನಿ ₹ 1.51 ಕೋಟಿ ದೇಣಿಗೆ.

ಗಾಂಧೀನಗರ, ಫೆಬ್ರವರಿ 19: ಮಹಾಶಿವರಾತ್ರಿಯ ಸಂದರ್ಭದಲ್ಲಿ ಶನಿವಾರದಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ, ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಮಗ ಆಕಾಶ್ ಅಂಬಾನಿ ಸೋಮನಾಥಕ್ಕೆ ಭೇಟಿ ನೀಡಿದರು.

ಮಹಾಶಿವರಾತ್ರಿ ಸಂದರ್ಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಮತ್ತು ಅವರ ಮಗ, ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಸೋಮನಾಥ ಮಹಾದೇವ್ ದೇಗುಲದಲ್ಲಿ ದರ್ಶನ ಪಡೆದರು. ಇವರಿಬ್ಬರನ್ನು ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಪಿ.ಕೆ. ಲಾಹಿರಿ, ಕಾರ್ಯದರ್ಶಿ ಯೋಗೇಂದ್ರಭಾಯಿ ದೇಸಾಯಿ ಸ್ವಾಗತಿಸಿದರು.

ಮುಕೇಶ್ ಅಂಬಾನಿ ಮತ್ತು ಆಕಾಶ್ ಅಂಬಾನಿ ದೇವರ ವಿಗ್ರಹದ ಮುಂದೆ ಅಭಿಷೇಕವನ್ನು ಮಾಡಿ, ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಅರ್ಚಕರು ಗೌರವಾರ್ಥವಾಗಿ ಗಂಧವನ್ನು ನೀಡಿದರು.

ಅಂಬಾನಿ ಕುಟುಂಬಸ್ಥರು ಹಿಂದೂ ಸಂಪ್ರದಾಯಗಳಲ್ಲಿ ಬಹಳ ನಂಬಿಕೆ ಇರಿಸಿದ್ದು, ಎಲ್ಲಾ ಹಿಂದೂ ಹಬ್ಬಗಳನ್ನು ಶ್ರದ್ಧಾ- ಉತ್ಸಾಹದಿಂದ ಆಚರಿಸುತ್ತಾರೆ. ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರು ಸೋಮನಾಥ ದೇವಸ್ಥಾನದ ಟ್ರಸ್ಟ್‌ಗೆ ₹ 1.51 ಕೋಟಿ ದೇಣಿಗೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!