ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾಗಿ ಪ್ರದೀಪ್‍ಕುಮಾರ್ ಎಸ್. ಆಯ್ಕೆ

ನಮ್ಮ ದಾವಣಗೆರೆ ಸೆ. 20: ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜ್ ಆದ ಎಸ್.ಎ.ಜಿ.ಬಿ. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರದೀಪ್‍ಕುಮಾರ್ ಎಸ್. ಅವರು ದಾವಣಗೆರೆ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇವರಿಗೆ ಎಸ್.ಕೆ.ಪಿ. ವಿದ್ಯಾಪೀಠದ ಅಧ್ಯಕ್ಷರಾದ ಆರ್.ಎಸ್. ನಾರಾಯಣಸ್ವಾಮಿ, ಕಾರ್ಯದರ್ಶಿಗಳಾದ ಕೆ.ಎನ್. ಅನಂತರಾಮಶೆಟ್ಟಿ, ಉಪಾಧ್ಯಕ್ಷರಾದ ಆರ್.ಎಲ್. ಪ್ರಭಾಕರ, ಖಜಾಂಚಿಗಳಾದ ಕಾಸಲ್ ಎಸ್. ಸತೀಶ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಕಾಲೇಜಿನ
ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!