ಪದ್ಮಶ್ರೀ ಪುರಸ್ಕೃತ ಡಾ. ಸಾಲುಮರದ ತಿಮ್ಮಕ್ಕ 111 ನೇ ವರ್ಷದ ಸಂಭ್ರಮದಲ್ಲಿ ಕರ್ನಾಟಕದ ಪರಿಸರ ರಾಯಬಾರಿಯಾಗಿದ್ದಾರೆ. 111 ವರ್ಷ ಸಂಭ್ರಮದಲ್ಲಿರುವ ಸಾಲುಮರದ ತಿಮ್ಮಕ್ಕ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಸಾಲುಮರದ ತಿಮ್ಮಕ್ಕನವರ 111ನೇ ಜನ್ಮದಿನ ಆಚರಣೆ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬೊಮ್ಮಾಯಿ ಅವರು, ‘ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲಿ ಎಂದು ಸ್ಥಾನಮಾನ ನೀಡಲಾಗಿದೆ ಎಂದರು.
ಮುಖ್ಯಮಂತ್ರಿ ಶ್ರೀ ಬೊಮ್ಮಾಯಿ ಅವರಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ಪ್ರಧಾನ. pic.twitter.com/QkGYUqBxFZ
— NammaDavangere.com (@nammadvg) June 30, 2022
ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ನೀಡಲಾಗಿದೆ. ಆ ನಿವೇಶನದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.