ಅಕ್ರಮವಾಗಿ ವನ್ಯ ಪ್ರಾಣಿಗಳ ಸಾಕಾಣಿಕೆ: ಎಸ್. ಎಸ್. ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ಮಿಲ್ ಮೇಲೆ ಅರಣ್ಯ ಇಲಾಖೆ ದಾಳಿ.

ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜನ್ ಒಡೆತನದ ಕಲ್ಲೇಶ್ವರ ಮಿಲ್ ಮೇಲೆ 20ಕ್ಕೂ ಹೆಚ್ಚು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಜಿಂಕೆ, ಕಾಡು ಹಂದಿ ಸೇರಿ ಇನ್ನೂ ಇತರೆ ಕಾಡು ಪ್ರಾಣಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972 ರ ಕಲಂ ಭಾರತೀಯ ದಂಡ ಸಂಹಿತೆ ಪ್ರಕಾರ ಅಕ್ರಮವಾಗಿ ವನ್ಯ ಪ್ರಾಣಿಗಳ ಸಾಕಾಣಿಕೆ ಶಿಕ್ಷಾರ್ಹ ಅಪರಾಧ ವಾಗಿದೆ.

ದಾಳಿ ವೇಳೆ ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಪತ್ತೆಯಾಗಿವೆ. ಈ ವನ್ಯ ಜೀವಿಗಳನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾಗಿರುವ ವನ್ಯಜೀವಿಗಳನ್ನು ಈಗಾಗಲೇ ಇಲಾಖೆಯ ವಶಕ್ಕೆ ಪಡೆಯಲಾಗಿದ್ದು, ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾದೆ ಎಂದು ದಾವಣಗೆರೆ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!